ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ನಿರ್ದೇಶನದಂತೆ, ಕಚೇರಿಗಳಲ್ಲಿ ಸಮಯಕ್ಕೆ ಸರಿಯಾಗಿ ಹಾಜರಾತಿಯನ್ನು ಖಚಿತಪಡಿಸಿಕೊಳ್ಳಲು ಈ ಕ್ರಮ ಕೈಗೊಳ್ಳಲಾಗಿದೆ
ಕೊಪ್ಪಳ:
ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಸರ್ಕಾರಿ ಅಧಿಕಾರಿ ಮತ್ತು ನೌಕರರು
ಕಡ್ಡಾಯವಾಗಿ 'ಕರ್ತವ್ಯ'
(KARTAVYA - KAAMS) ಮೊಬೈಲ್ ಅಪ್ಲಿಕೇಷನ್ನಲ್ಲಿ ನೋಂದಾಯಿಸಿಕೊಳ್ಳಬೇಕು
ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ರಾಜ್ಯ
ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ನಿರ್ದೇಶನದಂತೆ, ಕಚೇರಿಗಳಲ್ಲಿ ಸಮಯಕ್ಕೆ ಸರಿಯಾಗಿ ಹಾಜರಾತಿಯನ್ನು ಖಚಿತಪಡಿಸಿಕೊಳ್ಳಲು ಈ ಕ್ರಮ
ಕೈಗೊಳ್ಳಲಾಗಿದೆ.
ಮುಖ್ಯ
ಅಂಶಗಳು:
ಹಾಜರಾತಿ
ದಾಖಲಾತಿ: ಎಲ್ಲಾ ಎ, ಬಿ, ಸಿ ಮತ್ತು ಡಿ ವೃಂದದ ಅಧಿಕಾರಿ ಹಾಗೂ ನೌಕರರು ಈ ಮೊಬೈಲ್ ಆ್ಯಪ್ನಲ್ಲಿ ನೋಂದಣಿ
ಮಾಡಿಕೊಂಡು, ಪ್ರತಿದಿನ ತಮ್ಮ ಹಾಜರಾತಿಯನ್ನು ಕಡ್ಡಾಯವಾಗಿ
ದಾಖಲಿಸಬೇಕು.
ರಾಜ್ಯ
ಮಟ್ಟದ ಮಾಹಿತಿ: ಜೂನ್ 16ರ ಅಂಕಿಅಂಶಗಳ ಪ್ರಕಾರ,
ರಾಜ್ಯದಲ್ಲಿ ಇನ್ನೂ ಸುಮಾರು 2,13,925 ಅಧಿಕಾರಿಗಳು
ಮತ್ತು ನೌಕರರು ಈ ಆ್ಯಪ್ನಲ್ಲಿ ನೋಂದಾಯಿಸಿಕೊಂಡಿಲ್ಲ ಎಂದು ಗುರುತಿಸಲಾಗಿದೆ.
ವರದಿ
ಸಲ್ಲಿಕೆ: ಆಯಾ ಇಲಾಖಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳು
ನೋಂದಾಯಿಸಿಕೊಂಡಿರುವ ಬಗ್ಗೆ, ಕೈಗೊಂಡ ಕ್ರಮದ ವರದಿಯನ್ನು
ಮೂರು ದಿನಗಳ ಒಳಗಾಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ತಪ್ಪದೇ ಸಲ್ಲಿಸಬೇಕೆಂದು ಸೂಚಿಸಲಾಗಿದೆ.
ಸರ್ಕಾರದ
ಸೂಚನೆಯಂತೆ ಕರ್ತವ್ಯ ನಿರ್ವಹಣೆಯಲ್ಲಿ ಪಾರದರ್ಶಕತೆ ಮತ್ತು ಸಮಯಪಾಲನೆಯನ್ನು ಕಾಯ್ದುಕೊಳ್ಳಲು ಈ
ಅಪ್ಲಿಕೇಷನ್ ಕಡ್ಡಾಯವಾಗಿದ್ದು, ಎಲ್ಲಾ ನೌಕರರು ಕೂಡಲೇ
ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ತಿಳಿಸಲಾಗಿದೆ.
ಬರಹ:
- ಕಿರಣ್ ದಾನಿ (ರಣಗಲ್ ನ್ಯೂಜ್ ಸಂಸ್ಥಾಪಕರು)
All Rights Reserved: The complete rights of this column belong to 'RanagalNewz'. Republishing parts or the entirety of this article without prior permission is unlawful. Copyright © 2026
